ಭಾರತ ಸರಕಾರದ ರೈಲ್ವೆ ಇಲಾಖೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ನೇರ ನೇಮಕಾತಿಯ ಮೂಲಕ ಮಂಡ್ಯ ವಿಭಾಗದ ರೈಲ್ವೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಿ ಪವನ್ ಕುಮಾರ್ ಬಿ. ಶುಕ್ರವಾರದಂದು ಅಧಿಕಾರ ಸ್ವೀಕರಿಸಿದರು. ರೈಲ್ವೆ ಇಲಾಖೆಯಲ್ಲಿ ಪೊಲೀಸ್ ಕಾನ್ಸ್ಟೇಬಲ್ ಆಗಿ 2006 ರ ಏಪ್ರಿಲ್ ತಿಂಗಳಲ್ಲಿ ಮೈಸೂರು ರೈಲ್ವೆ ಸ್ಟೇಷನ್ ನಲ್ಲಿ ವೃತ್ತಿ ಜೀವನವನ್ನು ಆರಂಭಿಸಿದ ಬಳಿಕ ಭಡ್ತಿಗೊಂಡು ರೈಲ್ವೆ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಆಗಿ ಗೋವಾ ರಾಜ್ಯದ ವಾಸ್ಕೋ ಮತ್ತು ಮಡಂಗಾವ್ ರೈಲ್ವೆ ಸ್ಟೇಷನ್ ನಲ್ಲಿ ಕಾರ್ಯನಿರ್ವಹಿಸಿದ ಇವರು ರೈಲ್ವೆ ಇಲಾಖೆಯಲ್ಲಿ 20 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ.

ಇವರ ಸಹೋದರ ಪ್ರಣಾಮ್ ಕುಮಾರ್ ಗುಜರಾತ್ ರಾಜ್ಯದ ವಾಪಿ ಬ್ಯಾಂಕ್ ಆಫ್ ಬರೋಡ ಬ್ರಾಂಚ್ ನಲ್ಲಿ ಚೀಫ್ ಮ್ಯಾನೇಜರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಬಂಟ್ವಾಳ ತಾಲೂಕಿನ ಕೂರಿಯಾಳ ಜಗದೀಶ್ ಭಂಡಾರಿ ಹರೇಕಳ ಮೋಹಿನಿ ಜಗದೀಶ್ ಭಂಡಾರಿಯ ಪುತ್ರ. ಪತ್ನಿ ಅಕ್ಷತಾ ರಾಷ್ಟ್ರೀಯ ಮಟ್ಟದ ಕರಾಟೆ ಪಟು ತನಿಷ್ಕ ಮತ್ತು ಹಂಶಿಕ ಪುತ್ರಿಯರು.
ರೈಲ್ವೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಿ ಅಧಿಕಾರ ಸ್ವೀಕರಿಸಿದ ಪವನ್ ಕುಮಾರ್ ರಿಗೆ ಭಂಡಾರಿ ವಾರ್ತೆ ತಂಡವು ಈ ಸಂದರ್ಭದಲ್ಲಿ ಇವರಿಗೆ ಅಭಿನಂದನೆ ಸಲ್ಲಿಸಿ ಹೃತ್ಪೂರ್ವಕವಾಗಿ ಶುಭ ಹಾರೈಸುತ್ತದೆ.
-ಭಂಡಾರಿ ವಾರ್ತೆ